ನವದೆಹಲಿ(ಐಎಎನ್ಎಸ್/ಪಿಟಿಐ): ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಪ್ರಕರಣದಲ್ಲಿ ನಮ್ಮ ಬೇಡಿಕೆಯನ್ನು ತಿರಸ್ಕರಿಸುವ ಮೂಲಕ ಅಮೆರಿಕ ಅಪಹಾಸ್ಯ ಮಾಡುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ, ಅವರಿಂದ ತಪ್ಪಾಗಿದೆ ಅದಕ್ಕಾಗಿ ಅವರು ಕ್ಷಮೆಯಾಚಿಸಲೇ ಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ಶುಕ್ರವಾರ ತಿಳಿಸಿದ್ದಾರೆ.