ಹೈದರಾಬಾದ್(ಐಎಎನ್ಎಸ್): ‘ಸಮೈಕ್ಯ ಆಂಧ್ರ’ ಚಳವಳಿಯಲ್ಲಿ ಭಾಗವಹಿಸಲು ಅಕ್ಟೋಬರ್ ಮೊದಲ ವಾರದಲ್ಲಿ ಕಡಪಾ ಹಾಗೂ ಗುಂಟೂರು ಜಿಲ್ಲೆಗಳಿಗೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಸಂಸದ ಜಗನ್ ಮೋಹನ್ ರೆಡ್ಡಿ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.