ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ

Last Updated 1 ಜೂನ್ 2011, 8:30 IST
ಅಕ್ಷರ ಗಾತ್ರ

ಚಿಂತಾಮಣಿ: ಸಾರ್ವಜನಿಕ ಉದ್ದೇಶಗಳಿಗಾಗಿ ದುಡಿಯುವ ಸಂಘ ಸಂಸ್ಥೆಗಳಿಗೆ ನಿವೇಶನ ನೀಡುವ ಸಲುವಾಗಿ ಅತಿಕ್ರಮಣ ತೆರವುಗೊಳಿಸಲಾಗುತ್ತಿದೆಯೇ ಹೊರತು ನಮ್ಮ ಸ್ವಂತಕ್ಕಲ್ಲ ಎಂದು ಶಾಸಕ ಡಾ.ಎಂ.ಸಿ.ಸುಧಾಕರ್ ಹೇಳಿದರು.

ನಗರದ ಪ್ರಭಾಕರ್ ಬಡಾವಣೆಯಲ್ಲಿ ಗಾಯನ ಸಮಾಜ ಸೋಮವಾರ ಹಮ್ಮಿಕೊಂಡಿದ್ದ ವಾಗ್ಗೇಯಕಾರರ ಆರಾಧನಾ ಮಹೋತ್ಸವದಲ್ಲಿ ವಿದ್ವಾಂಸರನ್ನು ಸನ್ಮಾನಿಸಿ ಮಾತನಾಡಿದರು.

ನಗರದಲ್ಲಿ ರೈತರ ಸಂತೆ, ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಅತಿಕ್ರಮಣಕ್ಕೆ ಒಳಗಾದ ಸರ್ಕಾರಿ ಜಾಗವನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗಿಲ್ಲ. ನಗರದ ಖಾಸಗಿ ಬಸ್ ನಿಲ್ದಾಣವನ್ನು ರಾಮಕುಂಟೆ ಪ್ರದೇಶಕ್ಕೆ ಸ್ಥಳಾಂತರಿಸುವ  ಪ್ರಸ್ತಾವನೆ ಬಹುತೇಕ ಅಂತಿಮ ಹಂತದಲ್ಲಿದೆ ಎಂದರು.
"
ಸಾರ್ವಜನಿಕರಿಗೆ ಅಗತ್ಯವಾದ ಕಾರ್ಯಗಳಿಗೆ ಜಮೀನು ನೀಡಲು ಸ್ಥಳವಿಲ್ಲ, ಸರ್ಕಾರಿ ಕಡತಗಳಲ್ಲಿ ಸರ್ಕಾರದ ಜಮೀನಿದೆ. ಸ್ಥಳಕ್ಕೆ ಹೋಗಿ ನೋಡಿದರೆ ಅತಿಕ್ರಮಣವಾಗಿರುತ್ತದೆ. ಸರ್ಕಾರಿ ಜಮೀನುಗಳ ಸರ್ವೆ ಮಾಡಿಸಲು ಕಳೆದ ನಾಲ್ಕು ವರ್ಷಗಳಿಂದ ಸತತ ಪ್ರಯತ್ನ ನಡೆಸುತ್ತಿದ್ದರೂ ಪೂರ್ಣ ಯಶಸ್ಸು ದೊರೆತಿಲ್ಲ, ಅಧಿಕಾರಿಗಳ ಅಸಹಕಾರ, ರಾಜಕೀಯ ನಾಯಕರ ಒತ್ತಡಗಳು ಇದಕ್ಕೆ ಕಾರಣ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಾಲ್ಲೂಕಿನ ಚೆನ್ನಕೇಶವಪುರ, ಬಿಂಗಾನಹಳ್ಳಿ ಗ್ರಾಮಗಳಲ್ಲಿ ತಲಾ ರೂ. 10 ಲಕ್ಷ ವೆಚ್ಚದಲ್ಲಿ ಕಲಾಭವನ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಗಾಯನ ಸಮಾಜಕ್ಕೂ ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಡಿವೈಎಸ್‌ಪಿ ಆನಂದ್ ಮಾತನಾಡಿ, ಸಂಸ್ಕಾರವಿದ್ದು ಶ್ರದ್ಧೆ. ಭಕ್ತಿ ಮತ್ತು ಸತತ ಅಭ್ಯಾಸದಿಂದ ಮಾತ್ರ ಸಂಗೀತ ಒಲಿಯುತ್ತದೆ. ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುವಂತಹ ಸಂಗೀತ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರೋತ್ಸಾಹ ಸಿಗುತ್ತಿಲ್ಲ ಎಂದು ವಿಷಾದಿಸಿದರು.

ತಂಬೂರ ಶೃತಿಗಾಗಿ ಹುಳಿಕಲ್ ಪ್ರಸಾದ್, ಹಿಂದೂಸ್ತಾನಿ ಸಂಗೀತದ ಮಹಾಲಿಂಗಯ್ಯ, ಪಿಟೀಲು            ವಾದಕ ಜಿ.ಎನ್.ಶ್ಯಾಮಸುಂದರ್, ಮೃದಂಗದ ಕೆ.ವಿ.ಶಿವಲಿಂಗಯ್ಯ, ಸಮಾಜ ಸೇವೆಗಾಗಿ ಎನ್.ಎಸ್.ಪ್ರಭಾಕರ್, ತಬಲ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ಎಸ್.ವೆಂಕಟಾಚಲಪತಿ ಮಾತನಾಡಿದರು. ವಿದ್ವಾನ್ ಪುದುಕ್ಕೋಟೈ ರಾಮನಾಥನ್ ಅಧ್ಯಕ್ಷತೆ ವಹಿಸಿದ್ದರು. ಗಾಯನ ಸಮಾಜದ ಅಧ್ಯಕ್ಷ ಪುರುಷೋತ್ತಮರಾವ್ ಉಪಸ್ಥಿತರಿದ್ದರು. ಗಾಯನ ಸಮಾಜದ  ಕಾರ್ಯದರ್ಶಿ ಎಲ್.ವೈ.ಶ್ರೀನಿವಾಸರೆಡ್ಡಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT