ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆ ಮೋಹ ಬೇಡ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೀಳರಿಮೆ ಬೆಳೆಸಿಕೊಳ್ಳಬಾರದು. ಸರ್ಕಾರದ ಎಲ್ಲಾ ಸೌಕರ್ಯಗಳನ್ನೂ ಬಳಸಿ ಉತ್ತಮ ಕಲಿಕೆಯ ಕಡೆಗೆ ಹೆಚ್ಚು ಗಮನ ನೀಡಬೇಕು~ ಎಂದು ಮಹಾಲಕ್ಷ್ಮಿಪುರಂ ವಿಧಾನ ಸಭಾ ಕ್ಷೇತ್ರದ ಶಾಸಕ ನೆ.ಲ.ನರೇಂದ್ರಬಾಬು ಕರೆ ನೀಡಿದರು.

ನಗರದಲ್ಲಿ ಬುಧವಾರ ಕೃಷ್ಣಾನಂದನಗರದ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, `ಖಾಸಗಿ ಶಾಲೆಯ ವ್ಯಾಮೋಹವನ್ನು ಪೋಷಕರು ಬಿಡಬೇಕು~ ಎಂದರು.

`ಬಡ ಮಕ್ಕಳೇ ಹೆಚ್ಚಾಗಿ ಬರುವ ಕೃಷ್ಣಾನಂದನಗರದ ಶಾಲೆಗೆ ಹೆಚ್ಚಿನ ಮೂಲ ಸೌಕರ್ಯ ಒದಗಿಸಿ ಇಲ್ಲಿ ಪಿಯುಸಿ ಹಾಗೂ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು~ ಎಂದು  ನುಡಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ. ಮರಿಯಪ್ಪ ಮಾತನಾಡಿ,  `ಉತ್ತಮ ಫಲಿತಾಂಶಕ್ಕಾಗಿ ಕಲಿಸುವ ಸಂದರ್ಭಗಳಲ್ಲಿ  ಶಿಕ್ಷಕರು ತಮ್ಮನ್ನು ತಾವು  ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ~ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಅನ್ನಪೂರ್ಣ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕ ಟಿ.ಸಿ.ಚಂದ್ರಯ್ಯ, ಬಿಬಿಎಂಪಿ ಸದಸ್ಯೆ ಲಕ್ಷ್ಮೀ ಚಿಕ್ಕೇಗೌಡ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT