ಈ ಘಟನೆಯ ಬಗ್ಗೆ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ಎನ್ಸಿಪಿಸಿಆರ್ ಸೂಚಿಸಿದ್ದು, ಕ್ರಮ ಕೈಗೊಂಡಿರುವ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದೆ.
`ಈ ಘಟನೆಯಿಂದ ನೊಂದ ಮಕ್ಕಳ ಜೊತೆ ಸೂಕ್ತ ಆಪ್ತ ಸಮಾಲೋಚನೆ ಮತ್ತು ಈ ಮಕ್ಕಳ ಪೋಷಕರೊಂದಿಗೂ ಮಾತುಕತೆ ನಡೆಸುವಂತೆ ಆಗ್ರಹಿಸಿದ್ದೇವೆ. ಹಾಗೆಯೇ ಖಾಸಗಿ ಶಾಲೆಗಳಿಗೆ ಆರ್ಟಿಇ ಅನುಷ್ಠಾನ ಮಾಡುವಂತೆ ನಿರ್ದೇಶಿಸಬೇಕು ಎಂದೂ ಸೂಚಿಸಲಾಗಿದೆ~ ಎಂದು ಎಸ್ಸಿಪಿಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ.