ಬೆಂಗಳೂರು: `ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರ ಜಮೀನುಗಳಲ್ಲಿ ಕೊರೆಸಲಾದ 31,000 ಕೊಳವೆ ಬಾವಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ' ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಸೋಮವಾರ ವಿಧಾನ ಪರಿಷತ್ತಿಗೆ ಮಾಹಿತಿ ಒದಗಿಸಿದರು.
ಸದಸ್ಯ ಕೆ.ಬಿ. ಶಾಣಪ್ಪ ಕೇಳಿದ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಪರವಾಗಿ ಅವರು ಉತ್ತರ ನೀಡಿದರು.