ರೈತರಿಂದ ವಶಪಡಿಸಿಕೊಳ್ಳಲಾದ ಭೂಮಿಯಲ್ಲಿ ಭಾರತಿಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಮಹಾರಾಷ್ಟ್ರ ಕಾಂಗ್ರೆಸ್- ಎನ್ಸಿಪಿ ಸರ್ಕಾರದ ನೆರವಿನಿಂದ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಕೇಜ್ರಿವಾಲ್ ಆರೋಪಿಸಿದ್ದರು.
ಕಾಂಗ್ರೆಸ್ -ಎನ್ಸಿಪಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿದ್ದು ಕೇಜ್ರಿವಾಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಗಡ್ಕರಿ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ತನಿಖೆ ಎದುರಿಸಲು ಸಿದ್ದ ಎಂದಿದ್ದಾರೆ.