ಹೈದರಾಬಾದ್ (ಪಿಟಿಐ): ಸಿಮೆಂಟ್ ಕಂಪೆನಿಯೊಂದಕ್ಕೆ ಗಣಿ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ವೈ.ಶ್ರೀಲಕ್ಷ್ಮಿ ಹಾಗೂ ಆಂಧ್ರ ಪ್ರದೇಶ ಗಣಿ ಮತ್ತು ಭೂಗರ್ಭ ಇಲಾಖೆ ಮಾಜಿ ನಿರ್ದೇಶಕ ವಿ.ಡಿ.ರಾಜಗೋಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ನಿರ್ಧರಿಸಿದೆ.
ಈ ಸಂಬಂಧ ಅದು ಗುರುವಾರ ವಿಶೇಷ ಸಿಬಿಐ ನ್ಯಾಯಾಲಯದ ಅನುಮತಿ ಕೇಳಿದೆ.