ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದ ನ್ಯಾಯಾಲಯ, ಪ್ರಮಾಣ ಪತ್ರಗಳನ್ನು ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿತು. 2010ರ ಸೆಪ್ಟೆಂಬರ್ 13ರ ತೀರ್ಪನ್ನು ಪ್ರಶ್ನಿಸಿ ಜೆಎಸ್ಡಬ್ಲ್ಯು, ಕಲ್ಯಾಣಿ ಸ್ಟೀಲ್ಸ್ ಹಾಗೂ ರಾಜ್ಯ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿವೆ. ಕಳೆದ ಮೇ ತಿಂಗಳಲ್ಲಿ ಅರ್ಜಿ ವಿಚಾರಣೆಗೆ ಬಂದಾಗ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ಪೀಠ ಹೇಳಿತ್ತು.