ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶನಿಗೆ ಸಂಭ್ರಮದ ವಿದಾಯ

Last Updated 16 ಸೆಪ್ಟೆಂಬರ್ 2013, 6:58 IST
ಅಕ್ಷರ ಗಾತ್ರ

ವಿಜಾಪುರ: ನಗರವೂ ಸೇರಿದಂತೆ ಜಿಲ್ಲೆಯಲ್ಲಿ  ಪ್ರತಿಷ್ಠಾಪಿಸಿದ್ದ ಬಹುತೇಕ ಗಣೇಶ ವಿಗ್ರಹಗಳನ್ನು 7ನೇ ದಿನವಾದ ಭಾನುವಾರ ಸಡಗರದಿಂದ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು.

ನಗರದಲ್ಲಿ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಆನೆ, ಕುದುರೆಗಳನ್ನು ಬಳಸಿಕೊಳ್ಳಲಾಗಿತ್ತು. ಯುವಕರು ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿ­ಸಿದರು. ಗಜಾನನ ಉತ್ಸವ ಮಹಾ­ಮಂಡಳಿಯವರು ಇಲ್ಲಿಯ ಗಾಂಧಿಚೌಕ್‌ನಲ್ಲಿ ಸಮಾರಂಭ ಏರ್ಪಡಿಸಿ ಎಲ್ಲ ಸಾರ್ವಜನಿಕ ಗಣೇಶ ಉತ್ಸವ ಮಂಡಳಿಗಳ ಮುಖಂಡರನ್ನು ಸನ್ಮಾನಿಸಿದರು.

ಮೆರವಣಿಗೆ ಸುಗಮವಾಗಿ ಸಾಗುವ ದೃಷ್ಟಿಯಿಂದ ಪೊಲೀಸರು ಇಲ್ಲಿಯ ಗಾಂಧಿಚೌಕ್‌ನಿಂದ ಶಿವಾಜಿ ಚೌಕ್‌ವರೆಗಿನ ರಸ್ತೆಯ ಮಧ್ಯಭಾಗ­ದಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT