ಸ್ಪೀಕರ್ ಅವರ ಸಲಹೆಯ ಮೇರೆಗೆ ಶಾಸಕಾಂಗದ ಕಾರ್ಯದರ್ಶಿ ಎಸ್. ರಾಜಾ ಸದಾರಾಂ ಅವರು ಕರಡು ಪ್ರತಿಯನ್ನು ಸದನದಲ್ಲಿ ಮಂಡಿಸಿದರು. ಅಲ್ಲದೆ ತೆಲಂಗಾಣ ರಚನೆ ಕುರಿತು ತನ್ನ ಅಭಿಪ್ರಾಯ ತಿಳಿಸುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಡಿಸೆಂಬರ್ 12ರಂದು ರಾಜ್ಯಕ್ಕೆ ಕಳುಹಿಸಿದ ಆದೇಶದ ಪ್ರತಿಯನ್ನು ಉಲ್ಲೇಖಿಸಿದರು. ಸಂವಿಧಾನದ 3ನೇ ವಿಧಿಯನ್ವಯ ಮಸೂದೆಯನ್ನು ಮಂಡಿಸಿದರು.