ಕಾಂಗ್ರೆಸ್ ಸದಸ್ಯ ನಟರಾಜ್ ಹತ್ಯೆಯಿಂದ ತೆರವಾದ ಸ್ಥಾನಕ್ಕೆ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿ. ಗೋಪಾಲಕೃಷ್ಣ, ಬಿಜೆಪಿಯಿಂದ ಜಿ. ರಾಮಚಂದ್ರ, ಜೆಡಿಎಸ್ನಿಂದ ಪಿ.ಕೆ. ಸುರೇಶ್, ಎಐಎಡಿಎಂಕೆನ ಎಂ.ಪಿ. ಯುವರಾಜ್, ಜೆಡಿಯುನಿಂದ ಎಸ್. ಅಶ್ವತ್ಥನಾರಾಯಣ ಸ್ಪರ್ಧಿಸಿದ್ದರೆ, ಪಕ್ಷೇತರರಾಗಿ ಕೆ. ರಮೇಶ್,ಎಸ್.ಎನ್.ರಮೇಶ್, ಸಿ.ಜಿ.ಕೆ. ರಾಮು, ಅಬ್ದುಲ್ ಗಫಾರ್ ಕಣದಲ್ಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಿ. ರಾಮಚಂದ್ರ ಪರವಾಗಿ ಸಚಿವ ಆರ್. ಅಶೋಕ ಹಾಗೂ ಸಂಸದ ಪಿ.ಸಿ. ಮೋಹನ್ ಪ್ರಚಾರ ಕೈಗೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಟಿ. ಗೋಪಾಲಕೃಷ್ಣ ಪರವಾಗಿ ಶಾಸಕ ದಿನೇಶ್ ಗುಂಡೂರಾವ್ ಬಹಿರಂಗ ಪ್ರಚಾರ ನಡೆಸಿದರು.