ಗುಲ್ಬರ್ಗ: ಲೇಖಕಿ ಡಾ. ಗೀತಾ ನಾಗಭೂಷಣ ಅವರಿಗೆ ಕೊಲ್ಕತ್ತಾದ ಭಾರತೀಯ ಭಾಷಾ ಪರಿಷತ್ನಿಂದ 2011-12ನೇ ಸಾಲಿನ ರಚನಾ ಸಮಗ್ರ ಸಾಹಿತ್ಯ ಪುರಸ್ಕಾರ ದೊರೆತಿದೆ.
ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆ ಯನ್ನು ಒಳಗೊಂಡಿದ್ದು, ಮಾರ್ಚ್ 31ರಂದು ಕೊಲ್ಕತ್ತಾದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿ ಪಡೆದ ಕನ್ನಡದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಡಾ. ಗೀತಾ ನಾಗಭೂಷಣ ಪಾತ್ರರಾಗಿರುವುದಾಗಿ ಪ್ರಕಟಣೆ ತಿಳಿಸಿದೆ.