ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡು ಹಾರಿಸಿ ವ್ಯಕ್ತಿ ಪರಾರಿ

Last Updated 20 ಫೆಬ್ರುವರಿ 2012, 20:15 IST
ಅಕ್ಷರ ಗಾತ್ರ

ಬೆಂಗಳೂರು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ನೆಲಕ್ಕೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ನಗರದ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಕಾಲೋನಿಯ ಈಶ್ವರ ದೇವಾಲಯದ ಬಳಿ ಸೋಮವಾರ ರಾತ್ರಿ ಸುಮಾರು 10.30 ರ ಸಮಯದಲ್ಲಿ ಕ್ವಾಲಿಸ್ ಕಾರಿನಲ್ಲಿ ಬಂದಿರುವ ಅಪರಿಚಿತ ವ್ಯಕ್ತಿ ಕಾರಿನಿಂದ ಇಳಿದು ಕೂಗಾಡಿ, ನೆಲಕ್ಕೆ ಮೂರು ಸುತ್ತು ಗುಂಡು ಹಾರಿಸಿ ಬಂದ ಕಾರಿನಲ್ಲಿಯೇ ಪರಾರಿಯಾಗಿದ್ದಾನೆ. ಪಾಯಿಂಟ್ 22 ಪಿಸ್ತೂಲಿನಿಂದ ಗುಂಡು ಹಾರಿಸಲಾಗಿದ್ದು, ಕಾರಣ ತಿಳಿದು ಬಂದಿಲ್ಲ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಆತ ಕುಡಿದಿದ್ದ ಎಂದು ತಿಳಿದುಬಂದಿದೆ. ಸ್ಥಳ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಈಶಾನ್ಯ ವಲಯ ಡಿಸಿಪಿ ರವಿಕಾಂತೇಗೌಡ  `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT