ಬೆಂಗಳೂರು: ಉದ್ದೇಶಿತ ಗುಂಡ್ಯ ಜಲವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಗುಂಡ್ಯ ಯೋಜನೆಯಿಂದ ಪರಿಸರದ ಮೇಲೆ ಬೀರುವ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ರಚಿಸಿದ್ದ ಗಾಡ್ಗೀಳ್ ಸಮಿತಿ ಹಲವು ನಿರ್ಬಂಧಗಳನ್ನು ಹೇರಿದ್ದು, ಅದಕ್ಕೆ ಅನುಗುಣವಾಗಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲದ ಕಾರಣ ಕೈಬಿಡುವುದೇ ಸೂಕ್ತ ಎಂಬ ಇಂಗಿತವನ್ನು ಸರ್ಕಾರ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರ ವರದಿಯ ಬಗ್ಗೆ ತನ್ನ ನಿಲುವನ್ನು ಕೇಂದ್ರದ ಪರಿಸರ ಇಲಾಖೆಗೆ ಕಳುಹಿಸಿದ್ದು, ಅದರಲ್ಲಿ ಯೋಜನೆ ಕೈಬಿಡುವ ಇಂಗಿತವನ್ನು ವ್ಯಕ್ತಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.