ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಸುರಿದ ಮಳೆ

Last Updated 11 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಮಳೆ ಸುರಿದ ಪರಿಣಾಮ ಕೆಲವೆಡೆ ಮರಗಳು ಧರೆಗುರುಳಿದವು. ಇದೇ ವೇಳೆ ವಿವಿಧ ಬಡಾವಣೆಗಳಲ್ಲಿ ರಸ್ತೆಗೆ ನೀರು ನುಗ್ಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಯಿತು.

ಮಹದೇವಪುರ, ದ್ವಾರಕನಗರ, ಚಲ್ಲಘಟ್ಟ, ಹೊಸಕೆರೆಹಳ್ಳಿಯಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದು ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.

ವಿವೇಕನಗರ, ಶಾಮಣ್ಣ ಗಾರ್ಡನ್, ಪಟ್ಟೇಗಾರ ಪಾಳ್ಯ, ದೊಮ್ಮಲೂರಿನಲ್ಲಿ ರಸ್ತೆಗೆ ನೀರು ನುಗ್ಗಿ ವಾಹನಗಳ ಓಡಾಟಕ್ಕೆ ಅಡ್ಡಿಯಾಯಿತು. ಮ್ಯಾನ್‌ಹೋಲ್‌ಗಳಿಂದ ನೀರು ನುಗ್ಗಿದ ಪರಿಣಾಮ ವಾಹನ ಚಾಲಕರು, ಪಾದಚಾರಿಗಳಿಗೆ ತೊಂದರೆ ಉಂಟಾಯಿತು.  ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದರು. ಚಲ್ಲಘಟ್ಟದಲ್ಲಿ ಮನೆ ಮೇಲೆ ಭಾಗಶಃ ಬಿದ್ದಿದ್ದ ಮರವೊಂದನ್ನು ತೆರವುಗೊಳಿಸಲಾಯಿತು.

ನಗರದ ಒಳ ಭಾಗದಲ್ಲಿ 19.4 ಮಿ.ಮೀ ಮಳೆ ಸುರಿದಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ 22.0 ಮಿ.ಮೀ ಮಳೆಯಾಗಿದೆ. ಶುಕ್ರವಾರ ಕೂಡ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT