ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

Last Updated 28 ಜನವರಿ 2013, 19:44 IST
ಅಕ್ಷರ ಗಾತ್ರ

ಬೆಂಗಳೂರು:  ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘದ ಸದಸ್ಯರು ಪಾಲಿಕೆಯ ಪ್ರಧಾನ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

`ಬಿಬಿಎಂಪಿ ಕಳೆದ ಮೂರು ತಿಂಗಳಿನಿಂದ ವೇತನ ಬಿಡುಗಡೆ ಮಾಡಿಲ್ಲ. ಹಿಂದೆ ಪ್ರತಿಭಟನೆ ನಡೆಸಿದಾಗ ಬಾಕಿ ವೇತನವನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಆ ನಂತರ ವೇತನ ಬಿಡುಗಡೆ ಸಮರ್ಪಕವಾಗಿ ಆಗುತ್ತಿಲ್ಲ. ಪಾಲಿಕೆಯ ಅಧಿಕಾರಿಗಳು ಕೂಡಲೇ ವೇತನವನ್ನು ಬಿಡುಗಡೆ ಮಾಡಬೇಕು' ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

`ಬಿಬಿಎಂಪಿಯು ಪೌರ ಕಾರ್ಮಿಕರ ವೇತನ ಬಿಡುಗಡೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಪೌರ ಕಾರ್ಮಿಕರು ಕೆಲಸ ಮಾಡದೇ ಹೋದರೆ ನಗರ ಕಸದ ತೊಟ್ಟಿಯಾಗುತ್ತದೆ. ಆದರೆ, ಈ ಬಗ್ಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಜಾಣ ಕುರುಡು ತೋರುತ್ತಿದ್ದಾರೆ. ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಬಿಬಿಎಂಪಿ ಕೂಡಲೇ ಮುಂದಾಗಬೇಕು' ಎಂದು ಸಂಘದ ಅಧ್ಯಕ್ಷ ಎಸ್.ಬಾಲನ್ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT