ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆದಾರನ ಮೇಲೆ ಹಲ್ಲೆ

Last Updated 12 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿಯ ಬಿ.ನಾಗಸಂದ್ರದಲ್ಲಿ ಜಲಮಂಡಳಿಯು ಕೈಗೊಂಡಿರುವ ಕುಡಿಯುವ ನೀರಿನ ಕೊಳವೆ ಅಳವಡಿಕೆ ಕಾಮಗಾರಿಯ ಗುತ್ತಿಗೆದಾರ ಎಂ.ಶಿವರಾಜ್ ಮತ್ತು ಅವರ ಸಂಬಂಧಿಕರಾದ ದೇವರಾಜ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ್ದಾರೆ.

ಈ ಸಂಬಂಧ ದೇವರಾಜ್ ಅವರು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. `ಶಿವರಾಜ್ ಮತ್ತು ನಾನು ಅ.8ರಂದು ಕಾಮಗಾರಿಯ ಸ್ಥಳದಲ್ಲಿದ್ದೆವು. ಈ ವೇಳೆ ಕಾಮಗಾರಿಯ ಸ್ಥಳಕ್ಕೆ ಬಂದ ಭರತ್‌ಗೌಡ, ವೆಂಕಿ, ಕೃಷ್ಣಮೂರ್ತಿ ಮತ್ತು ಸೀನ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು.

ಅಲ್ಲದೇ 15 ಸಾವಿರ ನಗದು, 15 ಗ್ರಾಂ ತೂಕದ ಚಿನ್ನದ ಸರ ಮತ್ತು ಎರಡು ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾದರು~ ಎಂದು ದೇವರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಹಲ್ಲೆ, ಬೆದರಿಕೆ ಹಾಗೂ ದರೋಡೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT