ತುಮಕೂರು: ಗಲಭೆ, ಆಂತರಿಕ ಭದ್ರತೆ ವಿಷಯದಲ್ಲಿ ಗೃಹರಕ್ಷಕ ದಳ ನಿರ್ವಹಿಸುವ ನಿಸ್ವಾರ್ಥ ಸೇವೆ ಪೊಲೀಸರಿಗಿಂತ ಉತ್ತಮವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ್ಗುಪ್ತಾ ತಿಳಿಸಿದರು. ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗೃಹ ರಕ್ಷಕ ದಳದ ಕೇಂದ್ರೀಯ ವಲಯ ಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಗೃಹ ರಕ್ಷಕ ದಳದಲ್ಲಿ ರೈಫಲ್ ಶೂಟಿಂಗ್, ಫೈರ್ ಫೈಟಿಂಗ್ನಂತಹ ವೃತ್ತಿಪರ ಕ್ರೀಡೆಗಳ ತರಬೇತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮಾತನಾಡಿದರು. ಅಂತಿಮ ಸುತ್ತಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ತಂಡವು ಬೆಂಗಳೂರು ನಗರ ತಂಡವನ್ನು ಸೋಲಿಸಿ, ಪ್ರಶಸ್ತಿಗೆ ಭಾಜನವಾಯಿತು.