ಶ್ರೀರಂಗಪಟ್ಟಣ ವರದಿ: ಪಟ್ಟಣ ಹಾಗೂ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು.
ಪಟ್ಟಣದ ಪೊಲೀಸ್ ವಸತಿಗೃಹ, ಬೂದಿಗುಂಡಿ, ರಂಗನಾಥನಗರ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ವಾಟರ್ಗೇಟ್ ಬಳಿ ಚರಂಡಿಗಳ ನೀರು ಉಕ್ಕಿ ರಸ್ತೆಗೆ ಹರಿದ ಪರಿಣಾಮ ವಾಹನಸಂಚಾರಕ್ಕೆ ತೊಡಕಾಗಿತ್ತು. ಪೊಲೀಸ್ ವಸತಿಗೃಹ ಬಳಿ ನಿಲ್ಲಿಸಿದ್ದ ಬೈಕುಗಳು ಭಾಗಶಃ ನೀರಿನಲ್ಲಿ ಮುಳುಗಿದವು. ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಅವ್ಯವಸ್ಥೆ ಉಂಟಾಗಿದೆ. ಸ್ಥಳೀಯ ಪುರಸಭೆ ಇತ್ತ ಗಮನ ಹರಿಸುತ್ತಿಲ್ಲ ಎಂದು ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದರು.
ತಾಲ್ಲೂಕಿನ ಬೆಳಗೊಳ, ಕೆ. ಶೆಟ್ಟಹಳ್ಳಿ, ಕಸಬಾ ಹಾಗೂ ಅರಕೆರೆ ಹೋಬಳಿಗಳಲ್ಲಿ ಕೂಡ ಮಂಗಳವಾರ ಧಾರಾಕಾರ ಮಳೆ ಸುರಿದಿದೆ.