ರಾಯಚೂರು ತಾಲ್ಲೂಕಿನ ಕುರವಪುರ ಗ್ರಾಮದ ಶ್ರೀ ಶ್ರೀಪಾದ ಶ್ರೀವಲ್ಲಭ ದತ್ತಾತ್ರೇಯ ದೇವಸ್ಥಾನಕ್ಕೆ ಗುರುವಾರ ಕುಟುಂಬ ವರ್ಗದವರೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅದಿರು ಸಾಗಿಸುವ ಎರಡು ಬಂದರುಗಳಲ್ಲಿ ಸುಂಕ ಕಟ್ಟಿಯೇ ಸಾಗಿಸಬೇಕು. ಅದಿರು ಸಾಗಾಣಿಕೆ ನಿಷೇಧ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಕರ್ನಾಟಕ ರಾಜ್ಯದೊಂದಿಗೆ ಗೋವಾ ರಾಜ್ಯ ಉತ್ತಮ ಸಂಬಂಧ ಹೊಂದಿದೆ. ಕರ್ನಾಟಕ- ಗೋವಾ ರಾಜ್ಯದ ನಡುವೆ ಮೊದಲಿನಿಂದಲೂ ಉತ್ತಮ ಬಾಂಧವ್ಯವಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಹಲವಾರು ರೀತಿಯ ವಿಚಾರ ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂದರು.