ತಾಲ್ಲೂಕು ಪಂಚಾಯ್ತಿ ಸದಸ್ಯ ಐರಣಿ ಅಣ್ಣೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಗ್ರಾಮಾಭಿವೃದ್ಧಿ ಯೋಜನೆ ಹೊಸ ರೂಪ ನೀಡುತ್ತಿದೆ. ಬಡ ಜನರನ್ನು ಅದರಲ್ಲೂ ಮಹಿಳೆಯರನ್ನು ಸಂಘಟಿಸಿ ಮುಖ್ಯವಾಹಿನಿಗೆ ತರುತ್ತಿದೆ. ಯೋಜನೆಯ ಸೌಲಭ್ಯಗಳು ನೈಜ ಫಲಾನುಭವಿಗಳಿಗೆ ತಲುಪಬೇಕು. ಇದರಲ್ಲಿ ಸದಸ್ಯರು ಚೆನ್ನಾಗಿ ಕೆಲಸ ಮಾಡಬೇಕು. ಯೋಜನೆಯಿಂದ ಗ್ರಾಮೀಣ ಪ್ರದೇಶದ ಬಡ ಜರು ಆರ್ಥಿಕ ಸ್ಥಿತಿ ಸುಧಾರಿಸಲಿ ಎಂದು ಹಾರೈಸಿದರು.