ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಇಲ್ಲಿ ಈ ಕುಡಿಯುವ ನೀರಿಗಾಗಿ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದಾಗಿ ಈ ಪ್ರದೇಶದ ಸುಮಾರು 50ರಷ್ಟು ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ದೊರಕಿದಂತಾಗಿದೆ. ಅಲ್ಲದೆ ಇನ್ನಷ್ಟು ಮೂಲಸೌಲಭ್ಯಗಳ ವಿಸ್ತರಣೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು.
ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಅವರು ಮಾತನಾಡಿ ಗ್ರಾಮದ ಕೆಲವೊಂದೆಡೆ ಕುಡಿಯುವ ಸಮಸ್ಯೆಗೆ ಈ ಬಾರಿ ಬಂದ ಜಿಲ್ಲಾ ಪಂಚಾಯಿತಿ ಅನುದಾನದಿಂದಾಗಿ ಹೆಚ್ಚಿನ ಕಡೆಗಳ ಸಮಸ್ಯೆ ಬಗೆಹರಿದಿದೆ. ಅಲ್ಲದೆ ಇನ್ನಷ್ಟು ಅಭಿವೃದ್ದಿ ಕೆಲಸಗಳು ನಡೆಯಲಿ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರಾದ ಸುಲೈಮಾನ್, ನಯನ, ಯಮುನ, ಸಮಾಜ ಸೇವಕರಾದ ನಂದರಾಜ್ ಶೆಟ್ಟಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಉಗ್ಗಪ್ಪ ಮೂಲ್ಯ, ಸ್ಥಳೀಯರಾದ ಅಬ್ಬು, ಶರೀಫ್, ರಫೀಕ್, ಅಬ್ದುಲ್ಲಾ ಇನ್ನಿತರರು ಉಪಸ್ಥಿತರಿದ್ದರು.