ಚಿಕ್ಕಬಳ್ಳಾಪುರ: ನಗರದ ಮಹಿಳಾ ಸಾಮಖ್ಯಾ ಕೇಂದ್ರದ ಕಚೇರಿ ಆವರಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಮತ್ತು ಸ್ವಯಂ-ಸೇವಾ ಸಂಸ್ಥೆಗಳ ಸಂಪರ್ಕ ಸಭೆ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ ಮಾತನಾಡಿ, `ಸರ್ಕಾರದ ಯೋಜನೆಯಡಿ ಮಹಿಳಾ ಸಾಮಖ್ಯಾ ಕೇಂದ್ರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಮಹಿಳೆಯರ ಕಲ್ಯಾಣಕ್ಕೆ ಶ್ರಮಿಸುತ್ತಿದೆ~ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸುರೇಖಾ ವಿಜಯಪ್ರಕಾಶ್ ಮಾತನಾಡಿ, `ಉತ್ತಮ ಜೀವನ ರೂಪಿಸಿಕೊಳ್ಳಲು ಗ್ರಾಮೀಣ ಮಹಿಳೆಯರಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ಅಗತ್ಯವಿದೆ. ಅದಕ್ಕೆ ಜನರಲ್ಲಿ ಜಾಗೃತಿ ಮೂಡಿಸಿ~ ಎಂದು ಹೇಳಿದರು.
ಮೈರಾಡ ಸಂಸ್ಥೆ ಘಟಕದ ಸಂಯೋಜಕ ಎಸ್.ವೆಂಕಟರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಕುಮಾರ್, ಕೃಷಿ ಇಲಾಖೆಯ ಅಧಿಕಾರಿ ಶಶಿಧರ್, ಸೌಖ್ಯ ಸಂಜೀವಿನಿ ಸಂಸ್ಥೆಯ ವ್ಯವಸ್ಥಾಪಕ ಇಮ್ರಾನ್ ಖಾನ್, ಮಹಿಳಾ ಸಾಮಖ್ಯಾ ಸಂಸ್ಥೆ ಘಟಕದ ಸಂಯೋಜಕಿ ಸವಿತಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.