ದುಬೈ (ಪಿಟಿಐ): ದೀಪಾವಳಿ ಹಬ್ಬಕ್ಕೆ ಸಜ್ಜಾಗಿರುವ ಇಲ್ಲಿನ ಭಾರತೀಯರು ವಾಣಿಜ್ಯ ಕ್ಷೇತ್ರದಲ್ಲಿ ತಮ್ಮ ವ್ಯಾಪಾರ ವೃದ್ಧಿಗೆ ಒತ್ತು ನೀಡಿದ್ದಾರೆ.ಏರ್ಲೈನ್ಸ್ ಹೋಟೆಲ್, ಆಭರಣ ಅಂಗಡಿ ಹಾಗೂ ಇನ್ನಿತರ ವ್ಯಾಪಾರಸ್ಥರು ಈ ಸಮಯದಲ್ಲಿ ವ್ಯವಹಾರ ವೃದ್ಧಿಸಿಕೊಳ್ಳಲು ಮುಂದಾಗಿದ್ದು, ಅದಕ್ಕಾಗಿ ಗ್ರಾಹಕರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ.
ಹೋಟೆಲ್ಗಳಲ್ಲಿಯೂ ಸಹ ಗ್ರಾಹಕರಿಗೆ ಕಡಿಮೆ ದರದಲ್ಲಿ ವಿವಿಧ ಭಕ್ಷ್ಯ ಭೋಜನ ನೀಡಲು ವ್ಯವಸ್ಥೆ ಮಾಡಿದ್ದು, ಗ್ರಾಹಕರನ್ನು ತಮ್ಮತ್ತ ಸೆಳೆಯುವ ಯತ್ನ ಮಾಡಿವೆ.