ಭಾನುವಾರ ಅರಸೀಕೆರೆ ತಾಲ್ಲೂಕಿನಲ್ಲಿ ಆನೆಗಳು ಕಾಣಿಸಿಕೊಂಡಿದ್ದವು. ಅವು ಗಂಡಸಿ ಮಾರ್ಗವಾಗಿ ವಳಗೇರಹಳ್ಳಿ ಕೆರೆಗೆ ಬಂದಿವೆ. ಬನ್ನೇರುಘಟ್ಟದಿಂದ ಈ ಆನೆಗಳು ಬಂದಿರುವ ಸಾಧ್ಯತೆ ಇದೆ'ಎಂದು ವಲಯ ಅರಣ್ಯಾಧಿಕಾರಿ ಎ.ಈ. ಧರ್ಮಪ್ಪ ತಿಳಿಸಿದ್ದಾರೆ.
ಕೆರೆಯಲ್ಲಿ ಬೆಳಿಗ್ಗೆ ಆನೆಗಳು ಬೀಡು ಬಿಟ್ಟಿರುವ ವಿಷಯ ತಿಳಿದ ಸುತ್ತಲಿನ ಗ್ರಾಮದ ಗ್ರಾಮಸ್ಥರು ಜಮಾಯಿಸಿದರು. ಸ್ಥಳದಲ್ಲಿ ಅರಸೀಕೆರೆ, ತಿಪಟೂರು, ಹೊಳೆನರಸೀಪುರ, ಚನ್ನರಾಯಪಟ್ಟಣದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಬೀಡು ಬಿಟ್ಟಿದ್ದು, ಸಂಜೆಯಾಗುತ್ತಿದ್ದಂತೆ ಅವುಗಳನ್ನು ಬೆದರಿಸಿ ಓಡಿಸಲಾಯಿತು.