ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿ ಸ್ವಚ್ಛಗೊಳಿಸಿ ವಿನೂತನ ಪ್ರತಿಭಟನೆ

Last Updated 1 ಜೂನ್ 2013, 11:02 IST
ಅಕ್ಷರ ಗಾತ್ರ

ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ಚರಂಡಿಗಳು ಕೊಳಚೆಯಿಂದ ತುಂಬಿವೆ. ಯಾವ ಪ್ರದೇಶಕ್ಕೆ ಹೋದರೂ ಅಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿವೆ. ಸಾರ್ವಜನಿಕರು ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗದೆ ಈಗ ತಾವೇ ಮುಂದಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸ್ಥಳೀಯ ದಲಾಲ ಲೇನ್‌ನಲ್ಲಿ ದಿನಾಲೂ ಅಲ್ಲಿಯ ನಜೀರ್ ಎಂಬ ಯುವಕ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದಾನೆ.

ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಹೇಳಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇನ್ನೂ ಮುಂದಾದರೂ ನಗರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಈರಣ್ಣ ಜಿಗಜಿನ್ನಿ, ಕಿರಣ ಆಳಗಿ, ಪ್ರಕಾಶ ನಾವಿ, ವಿಶ್ವನಾಥ ಮುಗತಿ ಆಗ್ರಹಿಸಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT