ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ಮತ್ತು ನ್ಯಾಯಮೂರ್ತಿ ಬಿ. ಮನೋಹರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಈ ಆದೇಶ ನೀಡಿದೆ. ಬೆಂಗಳೂರಿನ ಜಗಜೀವನರಾಂ ನಗರ, ಗುಲ್ಬರ್ಗ ಜಿಲ್ಲೆ ವಾಡಿಯ ಸೇಂಟ್ ಆನ್ಸ್ ಕ್ಯಾಥೋಲಿಕ್ ಚರ್ಚ್ ಹಾಗೂ ಹುಬ್ಬಳ್ಳಿಯ ಕೇಶ್ವಾಪುರದ ಚರ್ಚ್ಗಳ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಈ ಆರೋಪಿಗಳ ವಿರುದ್ಧದ ವಿಚಾರಣೆ ಹೈಕೋರ್ಟ್ನಲ್ಲಿ ಬಾಕಿ ಇದೆ.
ವಾಯುಪಡೆಯಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಹುಸೇನ್, ಬಿಇಎಂಎಲ್ನಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ರೆಹಮಾನ್ ಸೇಠ್ ಮತ್ತು ಎ.ಎ. ಮುಲ್ಲಾ ಅವರಿಗೆ ವಿಧಿಸಿದ್ದ ಮರಣದಂಡನೆಯನ್ನು ನ್ಯಾಯಪೀಠ ರದ್ದು ಮಾಡಿದೆ. ಆರೋಪಿಗಳೇ ಬಾಂಬ್ ಸ್ಫೋಟಿಸಿದ್ದಾರೆ ಎಂದು ಹೇಳಲು ಪ್ರಬಲ ಸಾಕ್ಷ್ಯಗಳಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಶೇಖ್ ಹಾಶಿಂ, ಮಹಮದ್ ಫಾರೂಕ್, ಮಹಮದ್ ಸಿದ್ದಿಕ್ ಅಬ್ದುಲ್ ಹಬೀಬ್, ಶಂಸುಜಮ್ಮ, ಶೇಖ್ ಫರ್ದೀನ್ ವಾಲಿ ಮತ್ತು ಸೈಯದ್ ಅಬ್ದುಲ್ ಖಾದರ್ ಜಿಲಾನಿ ಅವರನ್ನು ದೋಷಮುಕ್ತಗೊಳಿಸಲಾಗಿದೆ.