ಬೆಂಗಳೂರು: ರಾಜ್ಯದಲ್ಲಿ ಚರ್ಚ್ಗಳ ಮೇಲಿನ ದಾಳಿ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ಸದಸ್ಯರು ನಗರದ ಪುರಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಪೀಟರ್ ಬಾಬು, `ರಾಜ್ಯದಲ್ಲಿ ಚಚ್ಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಅನ್ಯಧರ್ಮೀಯರು ಕ್ರೈಸ್ತರನ್ನು ವಿರೋಧಿಗಳಂತೆ ಕಾಣುವುದು ಹೆಚ್ಚಾಗಿದೆ. ಈ ಪ್ರವೃತ್ತಿ ತಪ್ಪಬೇಕು. ಚರ್ಚ್ಗಳ ಮೇಲಿನ ದಾಳಿ ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.