ಚೆನ್ನೈ (ಐಎಎನ್ಎಸ್): ಕಾಲಿನ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಸಚಿನ್ ತೆಂಡೂಲ್ಕರ್ ಸೆಪ್ಟೆಂಬರ್ 23ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ.
ಸಚಿನ್ ಆಡುವ ಬಗ್ಗೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ರಾಬಿನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಹರಭಜನ್ ಸಿಂಗ್ ಈ ಟೂರ್ನಿಯಲ್ಲಿ ಆಡುವ ವಿಚಾರವನ್ನು ಖಚಿತ ಪಡಿಸಿದ್ದಾರೆ. ಆಫ್ ಸ್ಪಿನ್ನರ್ ಸಹ ಗಾಯಗೊಂಡಿದ್ದರು. ಈಗ ಚೇತರಿಸಿಕೊಳ್ಳುತ್ತಿದ್ದಾರೆ.
ಇಂಗ್ಲೆಂಡ್ ಪ್ರವಾಸದ ವೇಳೆ ಮಾಸ್ಟರ್ ಬ್ಲಾಸ್ಟರ್ ಗಾಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 24ರಂದು ಮುಂಬೈ ಇಂಡಿಯನ್ಸ್ ತಂಡ ತನ್ನ ಚೊಚ್ಚಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ಎದುರು ಆಡಲಿದೆ. ಈ ತಂಡದ ಆಟಗಾರರು ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.