ಕೇರಳ, ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಮೊದಲಾದ ಪ್ರದೇಶಗಳಿಗೆ ಹೊರಟಿದ್ದ ಪ್ರಯಾಣಿಕರನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸುಮಾರು 20 ಬಸ್ಸುಗಳಲ್ಲಿ ಕಳಿಸುವ ವ್ಯವಸ್ಥೆಯನ್ನು ರೈಲ್ವೆ ಅಧಿಕಾರಿಗಳು ಮಾಡಿದ್ದರು.
ಅಪಘಾತ ನಡೆದ ಸ್ಥಳ ಕಾಡು ಮತ್ತು ಪ್ರಪಾತದ ಸ್ಥಳವಾಗಿದ್ದರಿಂದ ಭಯಭೀತರಾಗಿದ್ದ ಪ್ರಯಾಣಿಕರು ಬದುಕಿದೆಯ ಬಡ ಜೀವವೇ ಎಂದು ನಿಟ್ಟುಸಿರು ಬಿಟ್ಟರು. ಮಧ್ಯಾಹ್ನ 12.30ರ ವರೆಗೂ ಸಕಲೇಶಪುರ ರೈಲು ನಿಲ್ದಾಣ ಪ್ರಯಾಣಿಕರಿಂದ ಗಿಜಿಗುಡುತ್ತಿತ್ತು. ದಣಿದಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ವತಿಯಿಂದ ಕುಡಿಯುವ ನೀರು, ತಿಂಡಿ ವ್ಯವಸ್ಥೆ ಮಾಡಲಾಗಿತ್ತು.