ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಶಾಸಕರ ವಿರುದ್ಧ ಪ್ರತಿಭಟನೆ

ಇಂಗ್ಲಿಷ್, ಮರಾಠಿಯಲ್ಲಿ ಪ್ರಮಾಣವಚನ
Last Updated 1 ಜೂನ್ 2013, 11:35 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಮರಾಠಿ ಮತ್ತು ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರ ನಿಲುವು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಹಳೇ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಹನುಮಂತಪ್ಪ ವೃತ್ತದಲ್ಲಿ ಮರಾಠಿ, ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರ ವಿರುದ್ಧ ಅವರ ಪ್ರತಿಕೃತಿ ಸುಟ್ಟು ಹಾಕಿದರು.

ಬೆಳಗಾವಿ ಶಾಸಕರಾದ ಸಾಂಬಾಜಿ ಪಾಟೀಲ್, ಅರವಿಂದ ಪಾಟೀಲ ಮರಾಠಿ ಭಾಷೆಯಲ್ಲಿ, ಖಮರುಲ್ಲಾ ಇಸ್ಲಾಂ, ಅಶೋಕ್‌ಖೇಣಿ ಮತ್ತು ಉಮೇಶ್ ಜಾದವ್ ಆಂಗ್ಲಭಾಷೆಯಲ್ಲಿ ಪ್ರಮಾಣ ವಚನಸ್ವೀಕರಿಸಿದ್ದು, ಇವರು ನಾಡಿನ ಜನತೆಯ ಕ್ಷಮೆಯಾಚಿಸಬೇಕು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರ ಸದಸ್ಯತ್ವ ರದ್ದುಪಡಿಸಲು ವಿಧಾನಸಭೆ ಅಧ್ಯಕ್ಷರು ಮುಂದಾಗಬೇಕು. ಇಲ್ಲದಿದ್ದರೆ ಕನ್ನಡ ವಿರೋಧಿ ಶಾಸಕರ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ, ಮುಖಂಡರಾದ ಸಿದ್ದೇಗೌಡ, ಇರ್ಷಾದ್ ಅಹ್ಮದ್, ಆರ್.ಕುಮಾರ್, ಎಸ್.ಆರ್.ಮನೋಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT