ಚಿತ್ರದುರ್ಗ: ಇಲ್ಲಿನ ಕಬೀರಾನಂದಾಶ್ರಮದ ವತಿಯಿಂದ ನೀಡುವ `ಆರೂಢಶ್ರೀ~ ಪ್ರಶಸ್ತಿಗೆ ಈ ಬಾರಿ ಹಿರಿಯ ಸಾಹಿತಿ ಡಾ.ಎಂ. ಚಿದಾನಂದಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ. 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಕಬೀರಾನಂದಾಶ್ರಮದ ವತಿಯಿಂದ ಫೆ. 20ರಂದು ಆಯೋಜಿಸಿರುವ ಮಹಾಶಿವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪೀಠಾಧ್ಯಕ್ಷರಾದ ಶಿವಲಿಂಗಾನಂದ ಸ್ವಾಮೀಜಿ ಮಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.