ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಫೆ.13) ಮತ್ತು ಮಂಗಳವಾರ (ಫೆ.15) ಏಕದಿನ ಅಭ್ಯಾಸ ಕ್ರಿಕೆಟ್ ಪಂದ್ಯಗಳು ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.ಪಂದ್ಯಗಳು ನಡೆಯುವ ದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10.30ರವರೆಗೆ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.
ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ, ಕ್ರೀಡಾಂಗಣದ ಕಾಂಪೌಂಡಿಗೆ ಹೊಂದಿಕೊಂಡಂತಿರುವ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಮತ್ತು ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತಂದ ಹಡ್ಸನ್ ವೃತ್ತದವರೆಗೆ ಹಾಗೂ ಗ್ರ್ಯಾಂಡ್ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲ್ಲಿಸುವಂತಿಲ್ಲ.
ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಬಿಎಂಟಿಸಿ ಬಸ್ಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ.ನಿಲುಗಡೆಗೆ ಅವಕಾಶ: ಬಿ.ಆರ್.ವಿ ಮೈದಾನ, ಶಿವಾಜಿನಗರ ಬಸ್ ನಿಲ್ದಾಣದ ಒಂದನೇ ಮಹಡಿಯಲ್ಲಿ, ಕಿಂಗ್ಸ್ ರಸ್ತೆಯ ಪೂರ್ವ ಭಾಗದಲ್ಲಿ ಬಾಲಭವನ ಜಂಕ್ಷನ್ನಿಂದ ಹೈಕೋರ್ಟ್ ಜಂಕ್ಷನ್ವರೆಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.