ಬದುಕಿನುದ್ದಕ್ಕೂ ಮಾನವೀಯತೆಯ ಮಂತ್ರವನ್ನು ಜಪಿಸಿ, ಹಲವರಿಗೆ ಪ್ರೇರಣೆಯಾದ ಮಹಾನ್ ವ್ಯಕ್ತಿ' ಎಂದು ಬಣ್ಣಿಸಿದರು.
`ರಾಜಕೀಯ, ಸಾಮಾಜಿಕ ಎಲ್ಲ ವಿಚಾರಗಳ ಬಗ್ಗೆಯೂ ಸ್ವತಂತ್ರ ನಿಲುವು ಹೊಂದಿದ್ದ ಅವರು ಆ ಬಗ್ಗೆ ಮಾತನಾಡುತ್ತಿರಲಿಲ್ಲ. ಆದರೆ , ಅವೆಲ್ಲವೂ ನಡೆಯಲ್ಲಿ ಜಾರಿಯಾಗುತ್ತಿದ್ದವು' ಎಂದು ತಿಳಿಸಿದರು.
ಹಿರಿಯ ಪತ್ರಕರ್ತ ಡಿ.ವಿ.ರಾಜಶೇಖರ, `ಎಲ್ಲರಿಗೂ ಅಣ್ಣನಂತೆ ಮಾರ್ಗದರ್ಶನ ಮಾಡಿ, ಸದ್ದು ಮಾಡದೇ ಸಂತನಂತೆ ಬದುಕಿದರು' ಎಂದರು. ಚಿ.ಶ್ರೀನಿವಾಸರಾಜು ಕುರಿತ `ಅಂತರ್ಜಲ' ಸಾಕ್ಷಚಿತ್ರವನ್ನು ಪ್ರದರ್ಶಿಸಲಾಯಿತು. ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಇತರರು ಉಪಸ್ಥಿತರಿದ್ದರು.