ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಣಾಳಿಕೆ

Last Updated 25 ಫೆಬ್ರುವರಿ 2011, 17:25 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ‘ಸಚಿವೆ ಮಮತಾ ಬ್ಯಾನರ್ಜಿ ಶುಕ್ರವಾರ ಮಂಡಿಸಿದ ರೈಲ್ವೆ ಬಜೆಟ್ ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುವ ಚುನಾವಣೆಯ ಪ್ರಣಾಳಿಕೆಯಂತಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಪಶ್ಚಿಮ ಬಂಗಾಳವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ರೈಲ್ವೆ ಬಜೆಟ್ ಚುನಾವಣಾ ಘೋಷಣೆಯಂತಿದೆ. ಸಚಿವೆ ಮಮತಾ ಅವರು ಇಡೀ ದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಕೆಲವು ಜನಪ್ರಿಯ ಘೋಷಣೆಗಳನ್ನು ಹೊರತುಪಡಿಸಿದರೆ ಬಜೆಟ್ನಲ್ಲಿ  ಅಂತಹದ್ದೇನೂ ವಿಶೇಷ ಇಲ್ಲ’ ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ. ರಾಜಾ ತಿಳಿಸಿದರು.‘ವಸ್ತುಸ್ಥಿತಿಗಿಂತ ಮಹತ್ವಕಾಂಕ್ಷೆ ಹೆಚ್ಚಿರುವ ಈ ಬಜೆಟ್ ಯಾರಿಗೂ ಸಂತೋಷ ನೀಡಿಲ್ಲ ಎಂದು ಅವರು ಆಕ್ಷೇಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT