ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಬದಲು ಹಸು ನೀಡಬೇಕಿತ್ತು–ಸುಬ್ಬಾರೆಡ್ಡಿ

Last Updated 11 ಡಿಸೆಂಬರ್ 2013, 9:05 IST
ಅಕ್ಷರ ಗಾತ್ರ

ಗುಡಿಬಂಡೆ: ತಾಲ್ಲೂಕಿನಲ್ಲಿ ಕಾಲುಬಾಯಿ ರೋಗಕ್ಕೆ 74 ರಾಸುಗಳು ಸಾವನ್ನಪ್ಪಿದ್ದು, ಸರ್ಕಾರದಿಂದ ಪರಿ­ಹಾರದ ಚೆಕ್ ವಿತರಿಸುವ ಬದಲು ಜಾನುವಾರು­ಗಳನ್ನು ನೀಡಿದ್ದರೆ ಉಪಯೋಗವಾಗುತ್ತಿತ್ತು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ಕಾಲುಬಾಯಿ ಜ್ವರದಿಂದ ಸಾವನ್ನಪ್ಪಿದ 69 ರಾಸುಗಳಿಗೆ ಪರಿಹಾರದ ಚೆಕ್ ವಿತರಿಸಿ ಮಾತ­ನಾಡಿದ ಅವರು, ಈ ಹಣವನ್ನು ರೈತರು ಹೈನುಗಾರಿಕೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಾಲ್ಲೂಕು ಬರಡು ನಾಡು.

ರೈತರು ಸಂಕಷ್ಟಕ್ಕೆ ಸಿಲುಕದಂತೆ ಅಧಿಕಾರಿಗಳು ಹೈನುಗಾರಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿ ಎಂದು ಸೂಚಿಸಿದರು. ತಹಶೀಲ್ದಾರ್ ಎಸ್.ಶೈಲಜಾ ಮಾತನಾಡಿ ಒಟ್ಟು ₨16.65 ಲಕ್ಷದ ಪರಿಹಾರ ಚೆಕ್‌ಗಳನ್ನು ಫಲಾನು­ಭವಿಗಳಿಗೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ, ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಎನ್.ಅಶ್ವತ್ಥಪ್ಪ, ಉಪವ್ಯವಸ್ಥಾಪಕ ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಾರಾ­ಯಣಸ್ವಾಮಿ, ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ, ಸದಸ್ಯರಾದ ವೆಂಕಟನರಸಪ್ಪ, ಶ್ರೀನಿವಾಸ, ವೆಂಕಟರೋಣಪ್ಪ, ಅಬೀಬ್, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಸುಬ್ರಮಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT