ಭುವನೇಶ್ವರ: ಒಡಿಶಾದ ಕೆಐಐಟಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಬೆಂಗಳೂರಿನ ಕಾನೂನು ತಜ್ಞ ಪ್ರೊ. ಎನ್.ಎಲ್.ಮಿತ್ರ ಅಧಿಕಾರ ವಹಿಸಿಕೊಂಡಿದ್ದಾರೆ.
ಕಾನೂನು ಶಿಕ್ಷಣಕ್ಕೆ ಹೊಸ ದಿಕ್ಸೂಚಿ ನೀಡಿದ ಹೆಗ್ಗಳಿಕೆ ಮಿತ್ರ ಅವರಿಗಿದೆ. ಹಲವಾರು ರಾಷ್ಟ್ರೀಯ, ಅಂತರ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಮುಖ ಕಾನೂನು ಶಾಲೆಗಳಿಗೆ ಅವರು ಸಲಹೆಗಾರರಾಗಿದ್ದಾರೆ.
ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯ ರಾಷ್ಟ್ರೀಯ ಕಾನೂನು ಶಾಲೆ (ಎನ್ಎಲ್ಎಸ್ಐಯು), ಜೋಧಪುರದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್ಎಲ್ಯು) ಕುಲಪತಿಯಾಗಿ ಕಾರ್ಯ ನಿರ್ವಹಿಸಿದ ಅನುಭವವೂ ಅವರಿಗಿದೆ.