ಬೀದರ್: ತಾಲ್ಲೂಕಿನ ಚೌಳಿ ಗ್ರಾಮದಲ್ಲಿರುವ ಗಣೇಶ್ವರ ಅವಧೂತರ ಮಠದಲ್ಲಿ ಸೋಮವಾರ ಬೆಳಗಿನ ಜಾವ ಮಠದ ಮೂವರು ಸಾಧಕರು (ಕಿರಿಯ ಸ್ವಾಮೀಜಿಗಳು) 'ಅಗ್ನಿಪ್ರವೇಶ' ಮಾಡುವ ಮೂಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದುರಂತ ಬೆಳಗಿನ ಜಾವ 4 ರಿಂದ 4.30 ರ ನಡುವೆ ಸಂಭವಿಸಿದೆ ಎಂದು ಆಂದಾಜಿಸಲಾಗಿದೆ. ಕಟ್ಟಿಗೆ ರಾಶಿಗೆ ಬೆಂಕಿ ಹೊತ್ತಿ ಕೊಂಡಿರುವುದನ್ನು ಗಮನಿಸಿದ ಇತರೆ ಸಾಧಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸುಟ್ಟ ಕಟ್ಟಿಗೆಗಳ ರಾಶಿ ಕೆದಕಿದಾಗ ಕರಕಲಾದ ದೇಹಗಳು ಪತ್ತೆಯಾಗಿವೆ.