ಸಮಾವೇಶ ಸಿದ್ಧತೆ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. `ರೈತರ ವಿವಿಧ ಸಮಸ್ಯೆಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗಾಗಿ ಹಮ್ಮಿಕೊಳ್ಳಬೇಕಾಗಿರುವ ಯೋಜನೆಗಳ ಬಗ್ಗೆ ಸಮಾವೇಶದಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು' ಎಂದು ಅವರು ಹೇಳಿದರು.