ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಚಂಚಲಗುಡ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಜಗನ್ಮೋಹನ್ ರೆಡ್ಡಿ ಸೇರಿದಂತೆ ಮಾಜಿ ಆಂಧ್ರ ಸಚಿವ ಮೋಪಿದೇವಿ ವೆಂಕ ರಮಣ ರಾವ್, ಉದ್ಯಮಿ ನಿಮ್ಮಗಡ್ಡ ಪ್ರಸಾದ್ ಮತ್ತು ಉಳಿದವರನ್ನು ಹೆಚ್ಚಿನ ಭದ್ರತೆಯೊಂದಿಗೆ ಸಿಬಿಐ ಪ್ರಕರಣಗಳ ಪ್ರಥಮ ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.