ಹೈದರಾಬಾದ್ (ಐಎಎನ್ಎಸ್): ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕಡಪಾ ಸಂಸದ ವೈ.ಎಸ್.ಜಗನ್ಮೊಹನ್ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಜಾರಿ ನಿರ್ದೇಶನಾಲಯವು (ಇ.ಡಿ), ಜಗನ್ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಬುಧವಾರ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ದೆಹಲಿಯಿಂದ ಹೈದರಾಬಾದ್ಗೆ ಆಗಮಿಸಿರುವ ಇ.ಡಿ ಅಧಿಕಾರ ತಂಡವೊಂದು ಸ್ಥಳೀಯ ಅಧಿಕಾರಿಗಳ ಜತೆಗೂಡಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ಸಿಬಿಐ ಅಧಿಕಾರಿಗಳ ಸಹಾಯ ಕೂಡ ಪಡೆಯುತ್ತಿದೆ.