ಹೈದರಾಬಾದ್ (ಐಎಎನ್ಎಸ್): ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಂಸದ ವೈ.ಎಸ್. ಜಗನ್ಮೋಹನ್ ರೆಡ್ಡಿ ಬುಧವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಕಾರಣ ತಮ್ಮ ವಿರುದ್ಧ ಸಿಬಿಐ ಕೋರ್ಟ್ ಆರೋಪಪಟ್ಟಿ ಸಲ್ಲಿಸಿದ ನಂತರ ಜಗನ್ ಜಾಮೀನು ಕೋರಿದ್ದಾರೆ.