ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿ 14ರ ಬಳಿಕ ನಿರ್ಧಾರ ಸಾಧ್ಯತೆ

ಬಿಜೆಪಿಗೆ ಯಡಿಯೂರಪ್ಪ ಸೇರ್ಪಡೆ ವಿಚಾರ
Last Updated 24 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ತೊರೆದಿರುವ ಎಲ್ಲ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರಲು ಹಿರಿಯ ಬಿಜೆಪಿ ನಾಯಕರು ಒಲವು ತೋರಿದ್ದಾರೆ. ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಮುಖ್ಯ­ಮಂತ್ರಿಗಳ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಗುಜರಾತ್‌ ಮಾಜಿ ಮುಖ್ಯ­ಮಂತ್ರಿ ಕೇಶುಭಾಯ್‌ ಪಟೇಲ್‌ ಅವರೂ ಸೇರಿದಂತೆ ಪಕ್ಷ ಬಿಟ್ಟಿರುವ ಎಲ್ಲ ನಾಯಕರನ್ನು ಮರಳಿ ಕರೆತರುವ ಕುರಿತು ಚರ್ಚಿಸಲಾಯಿತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಪಕ್ಷ ಬಲಪಡಿಸುವ ಉದ್ದೇಶದಿಂದ ಹೊರ­ಗಡೆ ಹೋಗಿರುವ ನಾಯಕರನ್ನು ಒಗ್ಗೂಡಿಸುವ ಅಗತ್ಯವಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು. ಆದರೆ, ಅಂತಿಮ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರನ್ನು ಮರಳಿ ಕರೆತರುವ ಕುರಿತು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ವಿವರಿಸಿವೆ.

ಯಡಿಯೂರಪ್ಪನವರ ಮರು ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಜನವರಿ 14ರ ಬಳಿಕ ನಿರ್ಧಾರ ಪ್ರಕಟಿಸ­ಲಾಗುವುದು ಎಂದು ಬಿಜೆಪಿ ವಕ್ತಾರ ಪ್ರಕಾಶ್‌ ಜಾವಡೇಕರ್‌ ಅವರು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT