ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿಯಲ್ಲಿ 80ನೇ ಕನ್ನಡ ಸಾಹಿತ್ಯ ಸಮ್ಮೇಳನ

Last Updated 12 ಸೆಪ್ಟೆಂಬರ್ 2013, 19:30 IST
ಅಕ್ಷರ ಗಾತ್ರ

ಮಡಿಕೇರಿ: ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2014ರ ಜನವರಿ 7, 8 ಮತ್ತು 9ರಂದು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಹಮ್ಮಿ­ಕೊಳ್ಳಲು ತೀರ್ಮಾನಿಸಲಾಗಿದೆ.

ನಗರದ ಕೋಟೆ ವಿಧಾನ ಸಭಾಂಗಣ­ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈಗಾಗಲೇ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಜೆಟ್‌ನಲ್ಲಿ ಒಂದು ಕೋಟಿ ರೂಪಾಯಿ ಪ್ರಕಟಿಸ­ಲಾಗಿದ್ದು, ಹೆಚ್ಚುವರಿ­ಯಾಗಿ ಎರಡು ಕೋಟಿ ರೂಪಾಯಿ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಳ್ಳ­ಲಾಗುವುದು ಎಂದು ಸಚಿವರು ತಿಳಿಸಿದರು.  

ಸಾಹಿತ್ಯ ಸಮ್ಮೇಳನ  ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದಕ್ಕೆ ಜಿಲ್ಲೆಯ ಜನರ ಸಹಕಾರ ಅಗತ್ಯ. ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಸೇರಿ ಆಚರಣೆ ಮಾಡಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT