ಬೆಂಗಳೂರು (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಸೇರಿದಂತೆ ನಾಲ್ವರ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ ಸಿಬಿಐ ನ್ಯಾಯಾಲಯವು ಜುಲೈ 2 ರವರೆಗೆ ವಿಸ್ತರಿಸಿತು.
ಜನಾರ್ದನ ರೆಡ್ಡಿ ಸೇರಿದಂತೆ ಇತರೆ ನಾಲ್ವರ ಹೆಚ್ಚಿನ ವಿಚಾರಣೆಯ ಅಗತ್ಯವಿದೆ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ. ಅಂಗಡಿ ಅವರು ಅವರು ಜನಾರ್ದನ ರೆಡ್ಡಿ ಹಾಗೂ ಮೆಹಫಜ್ ಅಲಿಖಾನ್ ಸೇರಿದಂತೆ ಇತರೆ ಮೂವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ, ಆದೇಶ ಹೊರಡಿಸಿದರು.
ರೆಡ್ಡಿ ಪ್ರಸ್ತುತ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.