ಹೈದರಾಬಾದ್: ಜಗನ್ಮೋಹನ್ ರೆಡ್ಡಿ ಅವರ ವಿರುದ್ಧದ ಅಕ್ರಮ ಸಂಪತ್ತು ಪ್ರಕರಣದ ವಿಚಾರಣೆಯಲ್ಲಿ, ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರಿಗೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಜನ್ನತ್ ಹುಸೇನ್ ಅವರು ಮಹತ್ವದ ಸಾಕ್ಷಿಯಾಗಲಿದ್ದಾರೆ.
ಈ ಕುರಿತು ತನಿಖೆ ನಡೆಸಿದ ಸಿಬಿಐ, ಜಗನ್ರವರ ತಂದೆ ರಾಜಶೇಖರ ರೆಡ್ಡಿ ಅವರ ಆಪ್ತ ಸಹಾಯಕರಾಗಿದ್ದ ಸುರೀದು ಮತ್ತು ಜನ್ನತ್ ಹುಸೇನ್ ಅವರನ್ನೇ ಪ್ರಮುಖ ಸಾಕ್ಷಿಗಳನ್ನಾಗಿ ಹೆಸರಿಸಿದೆ ಎಂದು ಮೂಲಗಳು ತಿಳಿಸಿವೆ.