ಜಮ್ಮು (ಪಿಟಿಐ): ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಪ್ ಅವರ ನಡುವಿನ ಮಾತುಕತೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಠಾಣೆ ಮತ್ತು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿ 12 ಜನರನ್ನು ಹತ್ಯೆಮಾಡಿರುವ ಘಟನೆ ಗುರುವಾರ ನಡೆದಿದೆ.
ಎರಡು ಪ್ರತ್ಯೇಕ ದಾಳಿಯಿಂದ ಪೊಲೀಸರು, ಯೋಧರು ಮತ್ತು ನಾಗರೀಕರು ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ.
ಜಮ್ಮುವಿನ ಸಾಂಬಾ ಸಮೀಪದ ಸೇನೆ ನೆಲೆಯ ಮೇಲೆ ದಾಳಿ ಮಾಡಿರುವ ಉಗ್ರರು ಲೆ. ಕರ್ನಲ್ ಸೇರಿದಂತೆ ಮೂವರು ಯೋಧರನ್ನು ಹತ್ಯೆ ಮಾಡಿದ್ದಾರೆ.
ಮತ್ತೊಂದೆಡೆ ಕಥುವಾ ಪ್ರದೇಶದ ಹೀರಾನಗರ್ ಪೊಲೀಸ್ ಠಾಣೆ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಐವರು ಪೊಲೀಸರು ಮತ್ತು ನಾಲ್ವರು ನಾಗರೀಕರು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ.