ಬೆಂಗಳೂರು: ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆಗೆ ಸೋಮವಾರ ಶ್ರೀಲಂಕಾದ ಆರೋಗ್ಯ ಸಚಿವ ಮೈತ್ರಿ ಬಾಲಸಿರಿಸೇನ ಅವರು ಭೇಟಿ ನೀಡಿ, ಆಸ್ಪತ್ರೆಯ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ವೀಕ್ಷಿಸಿದರು.
ಆಸ್ಪತ್ರೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ಶುಚಿತ್ವ, ಸಾಮಾನ್ಯ ರೋಗಿಗೆ ದೊರಕುತ್ತಿರುವ ಚಿಕಿತ್ಸೆಯ ಬಗೆಗೆ ಪ್ರಶಂಸೆ ವ್ಯಕ್ತಪಡಿಸಿದರು.
‘ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆಯ ಆಡಳಿತಾತ್ಮಕ ಮತ್ತು ರೋಗಿಗಳ ಚಿಕಿತ್ಸಾ ವ್ಯವಸ್ಥೆಯನ್ನು ಶ್ರೀಲಂಕಾದ ಆಸ್ಪತ್ರೆಗಳಲ್ಲಿ ಅಳವಡಿಸಿಕೊಳ್ಳಲಾಗುವುದು’ ಎಂದರು.