ಮುಜಫ್ಫರ್ನಗರ (ಪಿಟಿಐ): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ಲೋಕದಳದ ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರದಾ ಹಾಗೂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಜಿತ್ ರಾಠಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾಡಳಿತದ ಅನುಮತಿ ಪಡೆಯದೇ ಜಯಪ್ರದಾ ಅವರು ಮಂಗಳವಾರ ಸಾರ್ವಜನಿಕ ಸಭೆ ನಡೆಸಿದ್ದ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಖಟ್ಲೆ: ಸರ್ಕಾರಿ ಕಟ್ಟಡಗಳ ಮೇಲೆ ಪಕ್ಷಗಳ ಬಾವುಟ ಹಾರಿಸಿದ್ದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರ ಮೇಲೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.